Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಜೂನಿಯರ್‌ ವಿಶ್ವಕಪ್‌ ಹಾಕಿ: ಸೆಮಿಫೈನಲ್‌ಗೆ ಭಾರತ

 sportsmail           

ಶಾರ್ದಾನಂದ ತಿವಾರಿ 21ನೇ ನಿಮಿಷದಲ್ಲಿ ಗಳಿಸಿದ ಏಕೈಕ ಗೋಲಿನಿಂದ ಬೆಲ್ಜಿಯಂ ವಿರುದ್ಧ 1-0 ಅಂತರದಲ್ಲಿ ಜಯ ಗಳಿಸಿದ ಭಾರತ ಒಡಿಶಾದಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್‌ ಹಾಕಿ ಚಾಂಪಿಯನ್ಷಿಪ್‌ನ ಸೆಮಿಫೈನಲ್‌ ತಲುಪಿದೆ.

ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ತಂಡ ಬಲಿಷ್ಠ ಜರ್ಮನಿ ತಂಡವನ್ನು ಎದುರಿಸಲಿದೆ. ಬೆಲ್ಜಿಯಂ ವಿರುದ್ಧ ಭಾರತ ಜೂನಿಯರ್‌ ವಿಶ್ವಕಪ್‌ನಲ್ಲಿ ಸತತ ಐದನೇ ಜಯ ಗಳಿಸಿದೆ.

ಉತ್ತಮ ಆಟ ಪ್ರದರ್ಶಿಸಿ ಎದುರಾಳಿಯ ಅವಕಾಶಗಳಿಗೆ ಅಡ್ಡಿಯಾದ ವಿಷ್ಣುಕಾಂತ್‌ ಸಿಂಗ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಗೋಲ್‌ ಕೀಪರ್‌ ಪವನ್‌ ಕುಮಾರ್‌ ಭಾರತವನ್ನು ಹಲವು ಬಾರಿ ರಕ್ಷಿಸಿದರು. ಮೂರು ಪೆನಾಲ್ಟಿ ಕಾರ್ನರ್‌ಗಳಲ್ಲಿ ಬೆಲ್ಜಿಯಂ ತಂಡಕ್ಕೆ ಗೋಲು ಗಳಿಸಿ ಮುನ್ನಡೆಯುವ ಅವಕಾಶ ಇದ್ದಿತ್ತು, ಆದರೆ ಪವನ್‌ ಕುಮಾರ್‌ ಅದಕ್ಕೆ ಅವಕಾಶ ಕಲ್ಪಿಸಲಿಲ್ಲ,

ಜರ್ಮನಿ ಮತ್ತು ಸ್ಪೇನ್‌ ನಡುವಿನ ಪಂದ್ಯ ನಿಗದಿತ ಅವಧಿಯಲ್ಲಿ 2-2 ಗೋಲುಗಳಿಂದ ಸಮಬಲಗೊಂಡಿತ್ತು, ನಂತರ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ 3-1 ಅಂತರದಲ್ಲಿ ಜಯ ಗಳಿಸಿತು.

ಅರ್ಜೆಂಟೀನಾ ತಂಡ ನೆದರ್ಲೆಂಡ್ಸ್‌ ವಿರುದ್ಧ 2-1 ಗೋಲುಗಳಿಂದ ಜಯ ಗಳಿಸಿ ಸೆಮಫೈನಲ್‌ ಪ್ರವೇಶಿಸಿತು. ಮಲೇ಼ಷ್ಯಾವನ್ನು 4-0 ಗೋಲುಗಳಿಂದ ಮಣಿಸಿದ ಫ್ರಾನ್ಸ್‌ ನಾಲ್ಕನೇ ತಂಡವಾಗಿ ಸೆಮಿಫೈನಲ್‌ ಪ್ರವೇಶಿಸಿತು.


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.