Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಏಷ್ಯಾ ಕಪ್‌ನಲ್ಲಿ ಮಿಂಚಿದ ಕನ್ನಡಿಗ ಹುಬ್ಬಳ್ಳಿಯ ಸರ್ವೇಶ್‌ ಬಾಲಪ್ಪ

ಬೆಂಗಳೂರು:

ಫಿಲಿಪ್ಪಿನ್ಸ್‌ನಲ್ಲಿ ಎರಡು ದಿನಗಳ ಕಾಲ ನಡೆದ ಏಷ್ಯ ಕಪ್‌ ಆಫ್‌ ರೋಡ್‌ ರೇಸಿಂಗ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಹುಬ್ಬಳ್ಳಿಯ ರೈಡರ್‌ ಸರ್ವೇಶ್‌ ಬಾಲಪ್ಪ ಹನುಮಣ್ಣವರ್‌ ಅವರು ಸ್ಕೂಟರ್‌ ಕ್ಲಾಸ್‌ ವಿಭಾಗದಲ್ಲಿ ಸಮಗ್ರ ಮೂರನೇ ಸ್ಥಾನ ಮತ್ತು ನೇಷನ್ಸ್‌ ಕಪ್‌ನಲ್ಲಿ ಸಮಗ್ರ ನಾಲ್ಕನೇ ಸ್ಥಾನ ಗಳಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ.

ಚೆನ್ನೈನ ಮಥನ ಕುಮಾರ್‌ ಕೂಡ ಭಾರತವನ್ನು ಪ್ರತಿನಿಧಿಸಿದ್ದ ಇನ್ನೋರ್ವ ರೈಡರ್‌.

ಹುಬ್ಬಳ್ಳಿಯ ಸರ್ವೇಶ್‌ ಬಾಲಪ್ಪ ಇತ್ತೀಚಿಗೆ ಮುಕ್ತಾಯಗೊಂಡ ಎಫ್‌ಎಂಎಸ್‌ಸಿಐ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲೂ ಚಾಂಪಿಯನ್‌ ಪಟ್ಟ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದರು.

ಚಾಂಪಿಯನ್‌ ರೈಡರ್‌ಗಳಿಗೆ ಎಫ್‌ಐಎಂ ಏಷ್ಯಾದ ಉಪಾಧ್ಯಕ್ಷ ಸುಜಿತ್‌ ಕುಮಾರ್‌ ಅಭಿನಂದನೆ ಸಲ್ಲಿಸಿದ್ದಾರೆ.


ಸೋಮಶೇಖರ್‌ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.